ಬೆಳ್ತಂಗಡಿ : ಕರಂಬಾರು ಕಾಪಿನಡ್ಕದಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭ ತೆಂಗಿನಕಾಯಿ ತಲೆ ಮೇಲೆ ಬಿದ್ದ ಪರಿಣಾಮ ಕರಂಬಾರು ಗ್ರಾಮದ ಕೆಳ್ಕರ ಕಾಪಿನಡ್ಕ ನಿವಾಸಿ, ಪ್ರಗತಿಪರ ಕೃಷಿಕ ಸತೀಶ್ ರಾವ್ (58) ಮೃತಪಟ್ಟಿದ್ದಾರೆ.
ತಲೆ ಹಾಗೂ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಫಲಕಾರಿಯಾಗಲಿಲ್ಲ.
ಸತೀಶ್ ರಾವ್ ರವರು ಸಾಮಾಜಿಕವಾಗಿ, ಧಾರ್ಮಿಕವಾಗಿ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸಹಿತ ಶ್ರೀ ಕೆಳ್ಕರ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಕೆ. ರಾಮಚಂದ್ರ ರಾವ್ ರನ್ನು ಅಗಲಿದ್ದಾರೆ.