ಬಂಟ್ವಾಳ: ತಾಲೂಕು ವೀರಕಂಭ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ರಿ. ವತಿಯಿಂದ ಎರ್ಮೆಮಜಲು ಜಂಕ್ಷನ್ನಲ್ಲಿ ನಿರ್ಮಾಣವಾದ “ಯುವ ಕೇಸರಿ ಭವನ” ದ ಲೋಕಾರ್ಪಣಾ ಕಾರ್ಯಕ್ರಮ ಫೆ.27 ರಂದು ನಡೆಯಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ದ್ವೀಪ ಪ್ರಜ್ವಲನೆ ಮಾಡುವ ಮೂಲಕ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕುಣಿತ ಭಜನೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಜರಗಲಿರುವುದು ಎಂದು ಕೇಸರಿ ಫ್ರೆಂಡ್ಸ್ ನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
