ಪುತ್ತೂರು: ತಾಲೂಕಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್ 4ರ ಸದಸ್ಯರೋರ್ವರ ಮರಣದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವ ರವರು 171 ಮತಗಳ ಅಂತರದಲ್ಲಿ ಜಯಗಳಿಸಿದ್ದು, ಅವರಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಆರ್ಯಾಪು ವಾರ್ಡ್ 4ರ ಸದಸ್ಯ ಗಿರೀಶ್ ಮರಿಕೆಯವರ ಮರಣದಿಂದ ತೆರವಾದ ಸ್ಥಾನಕ್ಕೆ ಫೆ.25 ರಂದು ಮತದಾನ ಪ್ರಕ್ರಿಯೆಗಳು ನಡೆದಿದ್ದು, ಇಂದು ಮತ ಏಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಗೊಂಡಿದೆ.
ವಾರ್ಡ್ 4ರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವ ರವರು 498 ಮತಗಳನ್ನು ಪಡೆದು, 327 ಮತಗಳನ್ನು ಪಡೆದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಜ್ವಲ್ ರೈ ತೊಟ್ಲ ರವರ ವಿರುದ್ಧ ಮತಗಳ 171 ಅಂತರದಿಂದ ಜಯಗಳಿಸಿದ್ದಾರೆ. 11 ಮತಗಳು ತಿರಸ್ಕೃತಗೊಂಡಿದೆ.
ಭರ್ಜರಿ ಜಯ ಕಂಡ ಯತೀಶ್ ರವರನ್ನು ಭಾರತೀಯ ಜನತಾ ಪಾಟಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ರವರ ಸಹಿತ ಹಲವು ಮಂದಿ ಪ್ರಮುಖರು ಉಪಸ್ಥಿತರಿದ್ದರು..