ಜಿನಿವಾ: ಇತ್ತೀಚೆಗೆ ಜಿನಿವಾದಲ್ಲಿ ನಡೆದ ವಿಶ್ವ ಸಂಸ್ಥೆ ಸಭೆಯಲ್ಲಿ ಸ್ವಯಂ ಘೋಷಿತ ದೇವಮಾನವ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಶಿಷ್ಯೆ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ.
ಇದು ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಕುರಿತಾದ ಸಭೆ. ಈ ಮಹತ್ವದ ಸಭೆಯಲ್ಲಿ ನನ್ನ ದೇಶದ ಮಹಿಳಾ ಪ್ರತಿನಿಧಿ ಭಾಗಿಯಾಗಿ ಚರ್ಚೆ ನಡೆಸಿದರು ಎಂದು ಕೈಲಾಸ SPH ನಿತ್ಯಾನಂದ ಎಂಬ ಹೆಸರಿನ ಟ್ವಿಟರ್ ಖಾತೆಯಿಂದ ಟ್ವಿಟ್ ಮಾಡಲಾಗಿದೆ. ಅಲ್ಲದೇ ಕೈಲಾಸ ದೇಶದ ಸಾಮಾಜಿಕ, ಆರ್ಥಿಕ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
ಇನ್ನು, ಸಭೆಯಲ್ಲಿ ವಿಶ್ವ ಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಲಾಗುತ್ತಿರೋ ವಿಜಯ ಪ್ರಿಯಾ ಎಂಬುವರು ಮಾತಾಡಿದರು. ಈ ವೇಳೆ ನಿತ್ಯಾನಂದರು ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ ನಿತ್ಯಾನಂದ ಶ್ರೀಗಳಿಗೆ ಭದ್ರತೆ ನೀಡಿ ಎಂದು ಆಗ್ರಹಿಸಿದ್ದಾರೆ.
ನಿತ್ಯಾನಂದ ಶ್ರೀಗಳು ಸ್ಥಾಪಿಸಿದ ಕೈಲಾಸ ದೇಶವು ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಷ್ಟ್ರ. ಶ್ರೀಗಳು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಹಿಂದೂ ಸಂಪ್ರದಾಯಗಳ ಪುನರುಜೀವನಗೊಳಿಸಿದ ಧೂತ. ಕೈಲಾಸ ಸುಸ್ಥಿರ ಅಭಿವೃದ್ಧಿಯನ್ನು ಹೊಂದಿದೆ ಎಂದು ಪ್ರತಿಪಾದಿಸಿದ್ದಾರೆ.
USK at UN Geneva: Inputs on the Achievement of Sustainability
— KAILASA's SPH Nithyananda (@SriNithyananda) February 25, 2023
Participation of the United States of KAILASA in a discussion on the General Comment on Economic, Social and Cultural Rights and Sustainable Development at the United Nations in Geneva
The Economic, Social, and… pic.twitter.com/pNoAkWOas8