ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಜ್ವರದಿಂದ ಮೃತಪಟ್ಟಿದ್ದಾರೆ.
ಬಿಳಿ ರಕ್ತ ಕಣಗಳ ಕುಸಿತದಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಸ್ಥಳೀಯವಾಗಿ ಡೆಂಗ್ಯೂ ಬಗ್ಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಜ್ಯೋತಿನಗರದ ಮಯ್ಯದ್ದಿ -ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು.
ಕೆಲವು ದಿನಗಳಿಂದ ಆಕೆ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಸಮಸ್ಯೆ ಉಲ್ಬಣಿಸಿ ರವಿವಾರ ರಾತ್ರಿ ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ.