ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಆಯ್ಕೆಯಾಗಿದ್ದಾರೆ.

ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ.
ಪ್ರಸ್ತುತ ಮೂಡಬಿದರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ BP ED ವಿದ್ಯಾರ್ಥಿನಿಯಾಗಿದ್ದಾರೆ.

























