ಪುತ್ತೂರು : ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ನಡೆದಿದೆ.
ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪುತ್ತೂರು ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (29) ಎಂದು ಗುರುತಿಸಲಾಗಿದೆ.
ವಿಘ್ನೇಶ್ ರವರು ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿಯನ್ನು ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ…