ಪುತ್ತೂರು : ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘ ಮುರ, ನೆಹರುನಗರದ ‘ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ’ದ ಉದ್ಘಾಟನಾ ಸಮಾರಂಭ ಮಾ.27 ರಂದು ನಡೆಯಲಿದೆ.
ನೂತನ ಕಟ್ಟಡವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ರವರು ಉದ್ಘಾಟಿಸಿ, ಆರ್ಶೀವಚನ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಕೆಯ್ಯೂರು ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್, ಪುತ್ತೂರು ಒಕ್ಕಲಿಗ ಸಂಘದ ಗೌರವಾಧ್ಯಕ್ಷರಾದ ಮೋಹನ್ ಗೌಡ ಇಡ್ಯಡ್ಕ, ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ನ ಅಧ್ಯಕ್ಷರಾದ ಮನೋಹರ ಡಿ.ವಿ., ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್ ರವರು ಆಗಮಿಸಲಿದ್ದಾರೆ.