ಬೆಳ್ತಂಗಡಿ : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮೃತರನ್ನು ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ (27) ಎಂದು ಗುರುತಿಸಲಾಗಿದೆ.
ಸಹಸವಾರ ವಿಶ್ವನಾಥ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರು ಕೆಲಸ ಮುಗಿಸಿ ಬೈಕಿನಲ್ಲಿ ಮುಂಡ್ರುಪ್ಪಾಡಿಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದಾಗ ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹ ಸವಾರ ವಿಶ್ವನಾಥ್ ಎಂಬವರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.