ಬೆಳಗಾವಿ: ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್ ಈಗಾಗಲೇ ಚುನಾವಣೆ ಗೆಲ್ಲಲು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೀಗ ಬಿಜೆಪಿ ಪಟ್ಟಿ ಮೇಲೆ ಆಕಾಂಕ್ಷಿತ ಅಭ್ಯರ್ಥಿಗಳ ನಿರೀಕ್ಷೆ ಹೆಚ್ಚಾಗಿದೆ.
ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಏಪ್ರಿಲ್ 6 ಅಥವಾ 7 ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತೀವಿ ಎಂದು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣೆ ತಯಾರಿ ಬಗ್ಗೆ ಇವತ್ತು ಸಮಾಲೋಚನೆ ಮಾಡುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿ ಅಲ್ಲ. ನಮ್ಮದು ಡೆಮಾಕ್ರಟಿಕ್ ಪಾರ್ಟಿ, ಅದರ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಆಗುತ್ತೆ. ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಎಕ್ಸಪರ್ಟ್. ಗ್ಯಾಸ್ ಸಿಡಿಲಿಂಡರ್ಗೆ ಹಣ ಕೊಡ್ತೀವಿ, ಹೆಣ್ಮಕ್ಕಳಿಗೆ ದುಡ್ಡು ಕೊಡ್ತೀವಿ ಎಂದು ಸುಳ್ಳು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.