ಪುತ್ತೂರು : ರಾಜ್ಯ ವಿಧಾನ ಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟಗೊಂಡಿದ್ದು, ರಾಜಕೀಯ ಪಕ್ಷಗಳು ತಮ್ಮ ಪ್ರಚಾರವನ್ನು ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲನೇ ಹಂತದ ಪಟ್ಟಿಯನ್ನು ಪ್ರಕಟಗೊಳಿಸಿದ್ದು, ಬಿಜೆಪಿ ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಗೊಳಿಸಿಲ್ಲ.., ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕಾಗಿ ಹಲವರ ಹೆಸರು ಮುನ್ನಲೆಗೆ ಬಂದಿದ್ದು, ಈ ಹಿನ್ನೆಲೆ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಅಭಿಪ್ರಾಯ ಸಂಗ್ರಹದ ಮೂಲಕ ಆಯ್ಕೆ ಮಾಡಲು ಮುಂದಾಗಿದೆ.
ಹೌದು.., ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಸಂಘ-ಪರಿವಾರ ಹಾಗೂ ಹಿಂದುತ್ವದ ಅಡಿಯಲ್ಲಿ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸುತ್ತಾರೆ. ಅದೇ ರೀತಿ ಈ ಬಾರಿ ಅಭ್ಯರ್ಥಿಗಳ ಆಯ್ಕೆಗೂ ಪಕ್ಷ ವಿಶೇಷ ತಂತ್ರಗಾರಿಕೆಯನ್ನು ರೂಪಿಸಿದೆ.
ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯಲು ಹಲವರ ಹೆಸರುಗಳು ಮುನ್ನಲೆಯಲ್ಲಿದ್ದು, ಆಂತರಿಕ ಭಿನ್ನಾಭಿಪ್ರಾಯ ಕಾರ್ಯಕರ್ತರಲ್ಲಿ ಇರುವುದರಿಂದ ಅಭಿಪ್ರಾಯ ಸಂಗ್ರಹ ನಡೆಯಿತು. ಮಂಗಳೂರಿನ ಸಂಘ ನಿಕೇತನದಲ್ಲಿ ಈ ಅಭಿಪ್ರಾಯ ಸಂಗ್ರಹ ನಡೆದಿದೆ.
ಎಂಟು ವಿಧಾನ ಸಭಾ ಕ್ಷೇತ್ರಕ್ಕೂ ಇಂದು ಅಭಿಪ್ರಾಯ ಸಂಗ್ರಹ ನಡೆದಿದ್ದು, ಒಂದೊಂದು ಕ್ಷೇತ್ರಕ್ಕೆ ಒಂದು ಗಂಟೆ ಕಾಲಾವಕಾಶ ನೀಡಲಾಗಿತ್ತು.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭಿಪ್ರಾಯ ಸಂಗ್ರಹದ ಸಮಯದಲ್ಲಿ ವೇದಿಕೆಯಲ್ಲಿ ಹಾಸನದ ಶಾಸಕ ಪ್ರೀತಮ್ ಗೌಡ, ಜಿಲ್ಲಾಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ವಿಧಾನ ಪರಿಷತ್ ನ ಸದಸ್ಯ ಅರುಣ್, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಜಗನ್ನಿವಾಸ್ ರಾವ್ ಉಪಸ್ಥಿತರಿದ್ದರು.
ಬಿಜೆಪಿ ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರದ ಅಧ್ಯಕ್ಷರುಗಳು, ಮಂಡಲದ ಪ್ರಮುಖರು ಅಭಿಪ್ರಾಯ ಸಂಗ್ರಹದಲ್ಲಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ. ಪುತ್ತೂರಿನಿಂದ ಅಭಿಪ್ರಾಯ ಸಂಗ್ರಹಕ್ಕೆ ಶಾಸಕ ಸಂಜೀವ ಮಠಂದೂರು ಸಹಿತ ಸುಮಾರು 125 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಹೇಗಿತ್ತು ಅಭಿಪ್ರಾಯ ಸಂಗ್ರಹ ಪತ್ರ..??
ಮುಂಚೆ ಸಿಗುತ್ತಿದ್ದ ಚುನಾವಣಾ ಬ್ಯಾಲೆಟ್ ಶೀಟ್ ಮಾದರಿಯಲ್ಲಿಯೇ ಅಭಿಪ್ರಾಯ ಸಂಗ್ರಹ ಪತ್ರ ಇದ್ದು, ಬ್ಯಾಲೆಟ್ ಶೀಟ್ ಮೇಲ್ಭಾಗದ ಎಡ ಮತ್ತು ಬಲದಲ್ಲಿ ಬಿಜೆಪಿ ಪಕ್ಷದ ಚಿಹ್ನೆ, ಮಧ್ಯದಲ್ಲಿ ಕರ್ನಾಟಕ ವಿಧಾನ ಸಭಾ ಚುನಾವಣೆ 2023 ಎಂದು ಶೀರ್ಷಿಕೆ ಬರೆದಿದ್ದು, ನಂತರ ನಂಬರ್, ಶೀರ್ಷಿಕೆಯಡಿಯಲ್ಲಿ ಮೂರು ಅಭ್ಯರ್ಥಿಗಳನ್ನು ಹೆಸರಿಸಲು ಜಾಗ, ಕೆಳಗೆ ಬರೆದವರ ಹೆಸರು ಮತ್ತು ಮೊಬೈಲ್ ನಂಬರ್.. ಪ್ರತ್ಯೇಕವಾಗಿ ಯಾರ ಹೆಸರನ್ನು ಉಲ್ಲೇಖಿಸದೆ ತಮಗೆ ಇಷ್ಟವಾದ ಅಭ್ಯರ್ಥಿಯ ಹೆಸರನ್ನು ಬರೆಯಲು ಅವಕಾಶ ಕಲ್ಪಿಸಲಾಗಿತ್ತು.