ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ.
ರಸ್ತೆಯ ಎರಡೂ ಭಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.
ಬಂಟ್ವಾಳ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

























