Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಧಾನ ಸಭಾ ಚುನಾವಣೆ-2023 : ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ..: ರಾಜ್ಯದ ಜನರ ಚಿತ್ತ ದ.ಕ.ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರ ಪುತ್ತೂರಿನತ್ತ.!!!

May 12, 2023
in Featured, ಪುತ್ತೂರು, ರಾಜಕೀಯ, ರಾಜ್ಯ
0
ವಿಧಾನ ಸಭಾ ಚುನಾವಣೆ-2023 : ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರ..: ರಾಜ್ಯದ ಜನರ ಚಿತ್ತ  ದ.ಕ.ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರ ಪುತ್ತೂರಿನತ್ತ.!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಹತ್ವದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಶುರುವಾಗಿದೆ.

Advertisement
Advertisement

2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ 72.81% ಮತದಾನ ನಡೆದಿದೆ.

ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರವು ಒಂದಾಗಿದ್ದು, ವಿಜಯ ಪತಾಕೆಯನ್ನು ಯಾರು ಹಾರಿಸಲಿದ್ದಾರೆ ಎಂಬ ಬಗ್ಗೆ ಕೂತೂಹಲ ಮೂಡಿಸಿದೆ.

Advertisement

ಈ ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 8 ಮಂದಿ ಕಣಕ್ಕಿಳಿದಿದ್ದು, ಇದರಲ್ಲಿ ಮೂವರ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಕಣದಲ್ಲಿರುವ 8 ಅಭ್ಯರ್ಥಿಗಳು

 ಆಶಾ ತಿಮ್ಮಪ್ಪ ಗೌಡ (ಬಿಜೆಪಿ)
  ಅಶೋಕ್‌ ಕುಮಾರ್‌ ರೈ (ಕಾಂಗ್ರೆಸ್‌)
ದಿವ್ಯ ಪ್ರಭಾ ಚಿಲ್ಲಡ್ಕ (ಜೆಡಿಎಸ್‌)
ಅರುಣ್‌ ಕುಮಾರ್‌ ಪುತ್ತಿಲ (ಪಕ್ಷೇತರ)
  ಡಾ. ವಿಶು ಕುಮಾರ್‌ (ಎಎಪಿ)
 ಶಾಫಿ ಬೆಳ್ಳಾರೆ (ಎಸ್‌ಡಿಪಿಐ )
  ಸುಂದರ ಕೊಯಿಲ (ಪಕ್ಷೇತರ)
ಐವನ್‌ ಫೆರಾವೋ (ಕೆಆರ್‌ಎಸ್‌)

ಈ ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 80.09% ಮತದಾನ ನಡೆದಿದ್ದು, 1,70,366 ಮಂದಿ ಮತ ಚಲಾಯಿಸಿದ್ದಾರೆ. 84,087 ಪುರುಷರು, 86278 ಮಹಿಳೆಯರು ಮತದಾನ ಮಾಡಿದ್ದಾರೆ. ಕಳೆದ ಬಾರಿಗೆ ಲೆಕ್ಕಾಚಾರ ಮಾಡಿದ್ರೆ ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಮತದಾನ ಕುಸಿತ ಕಂಡಿದೆ.

ರಾಜಕೀಯ ಪಡಸಾಲೆಯಲ್ಲಿ ಇದೀಗ ಸೋಲು-ಗೆಲುವಿನ ಲೆಕ್ಕಾಚಾರ ಪ್ರಾರಂಭವಾಗಿದ್ದು, ನೇರ ಹಣಾಹಣಿಯಲ್ಲಿರುವ ಮೂವರಲ್ಲಿ ಯಾರು ಗೆಲುವಿನ ನಗೆ ಬೀರಲಿದ್ದಾರೆ ಎಂಬ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ.

ಪುತ್ತೂರು ಕ್ಷೇತ್ರದಲ್ಲಿನ ತ್ರಿಕೋನ ಸ್ಪರ್ಧೆಯ ಹಣಾಹಣಿ ರಾಜ್ಯದ ಕಣ್ಣನ್ನೇ ಅಗಲಿಸಿದೆ. ತೀವ್ರ ಪೈಪೋಟಿಯ ಈ ಕ್ಷೇತ್ರದಲ್ಲಿ ಗೆಲುವು ಸಣ್ಣ ಅಂತರದಲ್ಲೇ ಎಂಬುದು ಬಹುತೇಕ ಖಚಿತವಾದಂತಿದೆ.

ಬಿಜೆಪಿ ಪಾಲಿಗೆ ಪುತ್ತೂರು ಹಿಂದುತ್ವದ ಪ್ರಯೋಗ ಶಾಲೆ. ಇದೇ ಕೋಟೆಯಲ್ಲೀಗ ಅಸಲಿ ಹಿಂದುತ್ವ ಯಾರದ್ದು ಎನ್ನುವುದೇ ವಿಷಯ. ಇದಕ್ಕೆ ಕಾರಣ ಬಿಜೆಪಿ ಮತ್ತು ಹಿಂದೂ ಮುಖಂಡನ ಸ್ಪರ್ಧೆ. ಇಬ್ಬರ ವಿಷಯವೂ ಒಂದೇ. ಹೀಗಾಗಿ ಮತದಾರ ಯಾರದ್ದು ಅಸಲಿ ಹಿಂದುತ್ವ ಎಂದು ತೀರ್ಪು ನೀಡುತ್ತಾನೋ ಎಂಬುದೇ ಕುತೂಹಲ. ರಾಜ್ಯ ಮತ್ತು ರಾಷ್ಟ್ರ ನಾಯಕರು ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದರು.

ಪಕ್ಷೇತರ ಹಾಗೂ ಬಿಜೆಪಿ ನಡುವಿನ ಕಿತ್ತಾಟದಲ್ಲಿ ಕಾಂಗ್ರೆಸ್‌ಗೆ ಲಾಭ ಅನ್ನುವ ಭಾವನೆ ಮೇಲ್ನೋಟಕ್ಕೆ ಎನಿಸಿದರೂ ಅದು ಪೂರ್ಣಸತ್ಯವಲ್ಲ. ಬಹಳ ವಿಚಿತ್ರವಾದ ಪರಿಸ್ಥಿತಿ ಕಣದಲ್ಲಿದೆ. ಒಬ್ಬರ ಸೋಲು, ಮತ್ತೊಬ್ಬರ ಗೆಲುವು ಎನ್ನುವುದು ಸಾಮಾನ್ಯ ಹೇಳಿಕೆ. ಇಲ್ಲಿ ಒಬ್ಬರ ಗೆಲುವು ಹಲವರ ಸೋಲು, ಹಲವರ ಸೋಲು ಒಬ್ಬನ ಗೆಲುವು ಎನ್ನುವಂತಾಗಿದೆ. ಈ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತ್ರಿಕೋನ ಸ್ಪರ್ಧೆಯಲ್ಲಿರುವ ಏಕೈಕ ಕ್ಷೇತ್ರವಿದು.

ಸಂಘಪರಿವಾರದ ಹಿನ್ನೆಲೆಯುಳ್ಳ ಮೂವರು ಅಭ್ಯರ್ಥಿಗಳು ಪರಸ್ಪರ ಎದುರಾಳಿಗಳಾಗಿದ್ದು, ಇಬ್ಬರ ಜಗಳದಲ್ಲಿ ಮೂರನೇಯವನಿಗೆ ಲಾಭ ಎನ್ನುವ ಗಾದೆ ಮಾತಿನಂತೆ ಕ್ಷೇತ್ರದ ಫಲಿತಾಂಶ ಬರುತ್ತೋ ಅಥವಾ ಬಿಜೆಪಿ ಭದ್ರಕೋಟೆಯನ್ನು ಬಿಜೆಪಿ ಉಳಿಸಿಕೊಳ್ಳುತ್ತೋ..!! ಅಥವಾ ಹಿಂದುತ್ವ ಆಧಾರದಡಿಯಲ್ಲಿ ಕಣಕ್ಕಿಳಿದಿರುವ ಪಕ್ಷೇತರ ಅಭ್ಯರ್ಥಿ ಜಯಭೇರಿ ಬಾರಿಸುತ್ತಾರೋ ಎಂದು ಕಾದು ನೋಡಬೇಕಿದೆ.

ನಾಳೆ ಮಂಗಳೂರಿನ ಸುರತ್ಕಲ್ ನ ಎನ್.ಐ.ಟಿ.ಕೆ ಯಲ್ಲಿ ಮತ ಎಣಿಕೆ ನಡೆಯಲಿದೆ.

ಬೆಟ್ಟಿಂಗ್ ಶುರುವಿಟ್ಟುಕೊಂಡವರಿಗೆ ಫುಲ್ ಕನ್ಫ್ಯೂಷನ್..!!

ಮತ ಚಲಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ಹಂತದ ನಿಟ್ಟುಸಿರು ಬಿಟ್ಟಿರಬಹುದು. ಆದರೆ, ವಾಸ್ತವವಾಗಿ ಈಗಿನಿಂದಲೇ
ಅವರ ಹೃದಯಬಡಿತ ಹೆಚ್ಚಾಗಿದೆ. ಮತ ಎಣಿಕೆ ನಡೆಯುವ ಶನಿವಾರದವರೆಗೂ ಅವರ ತಲೆಯಲ್ಲಿ ಸೋಲು- ಗೆಲುವಿನ ಲೆಕ್ಕಾಚಾರದ ಅಂಶಗಳೇ ಓಡುತ್ತಿರುತ್ತವೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಈಗ ಬೂತ್‌ಮಟ್ಟದಲ್ಲಿ ನಡೆದಿರುವ ಶೇಕಡವಾರು ಮತ ಚಲಾವಣೆಯ ಲೆಕ್ಕವಿಟ್ಟುಕೊಂಡು ತಾಳೆ ಹಾಕುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇಡೀ ದಿನ ಕ್ಷೇತ್ರದ
ಮತಗಟ್ಟೆಗಳಲ್ಲಿ ಕಾಣಿಸಿಕೊಂಡ ಮತದಾರರನ್ನೇ ನೋಡಿ
ಲೆಕ್ಕ ಹಾಕುವ ಕೆಲಸವೂ ನಡೆದಿದೆ.

ತಮ್ಮ ಪಕ್ಷದ ಮತದಾರರೆಂದು ಗುರುತಿಸಿಕೊಂಡಿರುವ ರಾಜಕೀಯ
ಪಕ್ಷಗಳಿಗೆ ಶೇ.60 ರಿಂದ 70 ರಷ್ಟು ಲೆಕ್ಕ ಸಿಗುವುದೇ ಇಲ್ಲಿಂದ. ಇನ್ನುಳಿದ ಲೆಕ್ಕವನ್ನು ಚಲಾವಣೆಯಾದ ಮತಗಳ ಆಧಾರದ ಮೇಲೆ ಹಾಕುತ್ತಾರೆ.

ಒಂದೆಡೆ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಗೆಲ್ಲುವ ಪಕ್ಷ
ಯಾವುದು..!!?? ಸಿಎಂ ಯಾರಾಗುತ್ತಾರೆ..!?? ಹಾಗೂ ಯಾವ
ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದರ ಮೇಲೆ ಬೆಟ್ಟಿಂಗ್ ಕಟ್ಟುವುದು ಶುರುವಾಗಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಈ ಮೂರು ಪಕ್ಷಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಮೇಲೂ ಬೆಟ್ಟಿಂಗ್ ನಡೆದಿದೆ. ಅಷ್ಟೇ ಅಲ್ಲದೇ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಪುತ್ತಿಲ ರವರು ಹೆಚ್ಚು ಮತ ಗಳಿಸುತ್ತಾರೆಯೇ ಅಥವಾ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಗಳಿಸುತ್ತಾರೆಯೇ ಎಂಬ ಬಗ್ಗೆಯೂ ಹಲವು ಮಂದಿಯ ನಡುವೆ ಬೆಟ್ಟಿಂಗ್ ನಡೆದಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ..

Previous Post

ಮೂಡುಶೆಡ್ಡೆ ಬಿಜೆಪಿ-ಕಾಂಗ್ರೆಸ್ ಘರ್ಷಣೆ ಪ್ರಕರಣ: ನಾಲ್ವರ ಬಂಧನ

Next Post

ವಿಟ್ಲ: ಮನೆಗೆ ಬಿದ್ದ ತೆಂಗಿನ ಮರ : ಸಂತ್ರಸ್ಥರ ಕುಟುಂಬಕ್ಕೆ ಭರವಸೆ ನೀಡಿದ ಅಶೋಕ್ ಕುಮಾರ್ ರೈ

OtherNews

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026

Leave a Reply Cancel reply

Your email address will not be published. Required fields are marked *

Recent News

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.