ಬಿಜೆಪಿ ಯುವ ಮೋರ್ಚಾ ಪುತ್ತೂರು ತಾಲೂಕು ಕಾರ್ಯದರ್ಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಎಂ. ರವರು ಬೂತ್ ಕಾರ್ಯದರ್ಶಿ ಹಾಗೂ ಬಿಜೆಪಿ ಯುವ ಮೋರ್ಚಾ ಪುತ್ತೂರು ತಾಲೂಕು ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಿದ್ದರಿಂದ ಮನನೊಂದು, ಕೆಲ ನಾಯಕರ ವರ್ತನೆಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಪುತ್ತೂರಿನ ಎಲ್ಲಾ ವ್ಯವಸ್ಥೆ ಸರಿಯಾಗುವವರೆಗೆ ಸಂಘಟನೆಯವರನ್ನು ದೂರ ಮಾಡಿದ್ದನ್ನು ಸರಿ ಮಾಡುವವರಿಗೆ ನಾನು ಪಕ್ಷದ ಜವಾಬ್ದಾರಿಯಲ್ಲಿರಲು ಬಯಸುವುದಿಲ್ಲ., ಆದಷ್ಟು ಬೇಗ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತೇನೆ. ಸ್ವತಂತ್ರವಾಗಿ ಮತ್ತೊಮ್ಮೆ ಸ್ಪರ್ಧಿಸುತ್ತೇನೆ. ಪುತ್ತೂರಿನಲ್ಲಿ ಬಿಜೆಪಿಯ ಹಿಂದುತ್ವವನ್ನು ಸೋಲಿಸಿದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ..