ಬೆಂಗಳೂರು : ರಾಜ್ಯದ ಹದಿನಾರನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಮೇ.24ರ ವರೆಗೆ ನಡೆಯಲಿದೆ.

ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಈ ಅಧಿವೇಶನದಲ್ಲಿ ನಡೆಯಿತು.
ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಇಂದು ಬೆಂಗಳೂರಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನ ಸ್ವೀಕರಿಸಿದರು.
ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.




























