ಪುತ್ತೂರು : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ರವರು ಪ್ರತಿಕ್ರಿಯಿಸಿದ್ದಾರೆ.
ಮಾಣಿ ಪೇಟೆಯಲ್ಲಿ ಇಂದು ಮಧ್ಯಾಹ್ನ ನಡೆದಿರುವಂತಹ ಘಟನೆ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ರಾಜಕಾರಣದ ಮುಖಾಂತರ ಪ್ರತೀಕಾರ ತೀರಿಸುವಂತಹ ಲಕ್ಷಣ ಕಾಣಿಸುತ್ತಿದೆ. ಇದನ್ನು ಹಿಂದೂ ಸಂಘಟನೆ ಸಹಿಸುವುದಿಲ್ಲ.., ಸಂಘಟನೆ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ.
ಅಹಿತಕರ ನಡೆಯುವ ಮೊದಲು ನಡುರಸ್ತೆಯಲ್ಲಿ ಹಲ್ಲೆ ಮಾಡುವಂತಹ ಕೆಲಸವನ್ನು ಯಾರೂ ಮಾಡಿದ್ದಾರೋ ಅವರ ವಿರುದ್ಧ ಪೇಟೆಯಲ್ಲಿರುವ ಕ್ಯಾಮರಾಗಳನ್ನು ಪರಿಶೀಲಿಸಿ ಶೀಘ್ರ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸುತ್ತೇವೆ.
ರಸ್ತೆಯಲ್ಲಿ ಗೂಂಡಾ ರಾಜಕಾರಣ ಮಾಡುವಂತದ್ದನ್ನು ಪೊಲೀಸ್ ಇಲಾಖೆ ತಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಘ-ಪರಿವಾರ ಹೋರಾಟದ ಮೂಲಕ ಉತ್ತರ ನೀಡಲಿದ್ದೇವೆ ಎಂದು ಅವರು ಹೇಳಿದರು.