ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವ ಜರುಗಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ, ಮುಖ್ಯ ಅತಿಥಿಯಾದ ಶಾಲಾ ಪೋಷಕರು ಹಾಗೂ ಭಾರತೀಯ ರಾಷ್ಟ್ರೀಯ ಪಕ್ಷದ ಮುಖಂಡರು ಯತೀಶ್ ಆಳ್ವಾ, ಸಂಚಾಲಕರಾದ ಭಾಸ್ಕರ ಆಚಾರ್ ಹಿಂದಾರು, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್, ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಪುತ್ತೂರಾಯ ಹಾಗೂ ಎಸ್.ಜಿ .ಕೃಷ್ಣ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಅತಿಥಿಗಳಾದ ಯತೀಶ್ ಆಳ್ವಾ ರವರು ಮಾತನಾಡಿ, ನಾವು ಶಾಲೆಯಲ್ಲಿ ಹೇಳುವಂತಹ ಶ್ಲೋಕಕ್ಕೆ ಪೂರಕವಾದ ಕೆಲಸವನ್ನು ಮಾಡಿ ಶೈಕ್ಷಣಿಕ ಎಂದು ಹೇಳಿ ವರ್ಷಕ್ಕೆ ಶುಭಾಶಯ ಕೋರಿದರು.
ಶಾಲಾ ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ಮಾತುಗಳೊಂದಿಗೆ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ ದೀಕ್ಷೆ ನೀಡಿದರು. ನಂತರ ಆರತಿ ಬೆಳಗಿ ತಿಲಕವಿಡುವ ಮೂಲಕ ಹೊಸ ವಿದ್ಯಾರ್ಥಿಗಳನ್ನು ಸ್ವಾಗತ ಮಾಡಲಾಯಿತು.
ಈ ಸಂದರ್ಭದಲ್ಲಿ 2022-23 ನೇ ಸಾಲಿನ 10ನೇ ತರಗತಿಯಲ್ಲಿ ರಾಜ್ಯಕ್ಕೆ ತೃತೀಯ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ವನ್ನು ಗಳಿಸಿದ ನಮ್ಮ ಶಾಲಾ ವಿದ್ಯಾರ್ಥಿ ತೇಜಸ್ ಎಸ್ ಆರ್ ನ್ನು ಗೌರವಿಸಲಾಯಿತು.
ಸಂಚಾಲಕರು ಮಾತನಾಡುತ್ತ ನಾವು ಆಯ್ಕೆ ಮಾಡಿಕೊಂಡ ಯಾವುದೇ ಕ್ಷೇತ್ರವಿರಲಿ ಭವಿಷ್ಯತ್ತಿನಲ್ಲಿ ಯಾರಿಗೂ ತೊಂದರೆ ಕೊಡದಂತಹ ವ್ಯಕ್ತಿಗಳಾಗಿ ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರಜೆಗಳಾಗಿ ಇನ್ನೊಬ್ಬರಿಗೆ ಸಹಾಯಹಸ್ತ ರಾಗಿ ಬಾಳಿ ಎಂದು ಆಶೀರ್ವದಿಸಿದರು.
ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ರವರು ಮಾತನಾಡುತ್ತಾ ರಾಮ- ಕೃಷ್ಣರ ಹಾಗೆ ಶ್ರಮ ಪಟ್ಟು ಉತ್ತಮ ಸಾಧನೆ ಮಾಡಿ ಉತ್ತಮ ಅಂಕಗಳನ್ನು ಪಡೆದು ಸುಸಂಸ್ಕೃತ ಮಕ್ಕಳಾಗಿ ಬಾಳಿ ಎಂದು ಆಶೀರ್ವದಿಸಿದರು.
ನೀತು ರವರು ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ರವರು ಎಲ್ಲರನ್ನೂ ಸ್ವಾಗತಿಸಿ, ಸುಕನ್ಯಾ ರವರು ಧನ್ಯವಾದಗೈದರು.