ಬೆಂಗಳೂರು : ಅರುಣ್ ಕುಮಾರ್ ಪುತ್ತಿಲ ರವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಸಿದ್ದಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ಹಾಗೂ ಕಿರಿಯ ಶ್ರೀಗಳಾದ ಪೂಜ್ಯ ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳ ಆಶೀರ್ವಾದ ಪಡೆದರು.
ಮಠಾಧ್ಯಕ್ಷರು ಅರುಣ್ ಕುಮಾರ್ ಪುತ್ತಿಲ ರವರ ಜೊತೆ ರಾಜಕೀಯ ಹಾಗೂ ಹಿಂದುತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.
ಹಿಂದುತ್ವದ ವಿಚಾರಧಾರೆಯ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ಇನ್ನೊಮ್ಮೆ ಮಠಕ್ಕೆ ಆಗಮಿಸಬೇಕೆಂದು ಪುತ್ತಿಲರಲ್ಲಿ ಮಠದ ಆಡಳಿತ ಮಂಡಳಿ ತಿಳಿಸಿದೆ ಎಂದು ವರದಿಯಾಗಿದೆ..