ಬಂದರು ಮತ್ತು ಮೀನುಗಾರಿಕೆ ಸಚಿವ ಹಾಗೂ ಸುಳ್ಯದ ಶಾಸಕರಾದ ಎಸ್.ಅಂಗಾರರವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸಿದ್ದು, ರಾಜ್ಯಪಾಲರು ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.
ಅಂಗಾರರಿಗೆ ಉಡುಪಿ ಜಿಲ್ಲೆಯ ಉಸ್ತುವಾರಿ ದೊರೆಯುತ್ತದೆಂದು ಹೇಳಲಾಗುತಿತ್ತು. ಅದಕ್ಕೆ ಪೂರಕವಾಗಿ ಜ. 26 ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಅವರು ಉಡುಪಿಯಲ್ಲೇ ನರೆವೇರಿಸಿದ್ದರು. ಆದರೆ ಇದೀಗ ಪ್ರಕಟಗೊಂಡ ಅಧಿಕೃತ ಆದೇಶದಲ್ಲಿ ಎಸ್.ಅಂಗಾರರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.