ವಿಟ್ಲ : ಬಂಟ್ವಾಳ ಮೂಲದ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಮೂಡಿಗೆರೆ ತಾಲೂಕು ಬಣಗಲ್ ಠಾಣಾ ವ್ಯಾಪ್ತಿಯ ದೇವರಮನೆ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಬಂಟ್ವಾಳ ತಾಲೂಕು ಇರಾ ಗ್ರಾಮದ ಕಾಫಿಕಾಡ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಸವಾದ್ (35) ಮೃತ ಯುವಕ.
ಮೃತದೇಹದ ಗುರುತು ಸಿಗದಂತೆ ಮುಖಕ್ಕೆ ಬೆಂಕಿಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೊಲೆಗೈದಿದೆ ಎನ್ನಲಾಗುತ್ತಿದೆ. ಗಾಂಜಾ ವ್ಯವಹಾರದಲ್ಲಿ ಮನಸ್ತಾಪದ ಹಿನ್ನೆಲೆ ಈ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಕೊಲೆಗೈದ ಹಂತಕರ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆಂದು ವರದಿಯಾಗಿದೆ.
ಕರಾವಳಿಯ ಗ್ರಾಮೀಣ ಪ್ರದೇಶಗಳು ನಶೆಕೋರರ ತಾಣವಾಗುತ್ತಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.