ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ವಿಟ್ಲ ಶಾಖೆಯು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಕಟ್ಟಡದಿಂದ ಸ್ಥಳಾಂತರಗೊಂಡು ವಿಟ್ಲ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಹನುಮಾನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ನೂತನ ಮಳಿಗೆಯನ್ನು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಟ್ಲ ಅರಮನೆ ಬಂಗಾರು ಅರಸರು ಉದ್ಘಾಟಿಸಿದರು.
ವಿಟ್ಲ ಹನುಮಾನ್ ಕಾಂಪ್ಲೆಕ್ಸ್ ನ ಮಾಲಕರಾದ ಕೆ. ವೆಂಕಟೇಶ್ ಭಟ್ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್.ಎಸ್ ರಮೇಶ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಗವತಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ನಾರಾಯಣ ಕೆ. ರವರು ವಹಿಸಿದ್ದರು. ಕೊಡಿಯಾಲ್ ಬೈಲ್, ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ ಉಳ್ಳಾಲ್, ಬೋಳ್ನಾಡು ಶ್ರೀ ಭಗವತೀ ಕ್ಷೇತ್ರದ ಅರ್ಚಕರಾದ ಚಂದ್ರಶೇಖರ್ ಮಡಿಯಾಳ, ಉಪ್ಪಳ ಶ್ರೀ ಭಗವತಿ ಕ್ಷೇತ್ರದ ಆಚಾರಪಟ್ಟವರಾದ ಗೋಪಾಲ ಬೆಳ್ಚಪಾಡ, ಬ್ಯಾಂಕ್ ನ ಉಪಾಧ್ಯಕ್ಷರಾದ ಸುರೇಶ್ ಭಟ್ನಗರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಧಾನ ವ್ಯವಸ್ಥಾಪಕರಾದ ಸುಷ್ಮಾ ಸ್ವಾಗತಿಸಿ, ಜಪ್ಪು ಶಾಖೆಯ ಶಾಖಾ ವ್ಯವಸ್ಥಾಪಕರಾದ ರಾಘವ್ ಉಚ್ಚಿಲ್ ಧನ್ಯವಾದಗಳು ಸಮರ್ಪಿಸಿದರು.

ಬ್ಯಾಂಕ್ ನ ಎಲ್ಲಾ ಶಾಖಾಧಿಕಾರಿಗಳು, ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಹಾಗೂ ಗ್ರಾಹಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




























