ಪುತ್ತೂರು : ಜಾತ್ರೆಗಳಲ್ಲಿ ಭಾರೀ ಮೊತ್ತಕ್ಕೆ ಅಂಗಡಿಗಳನ್ನು ಏಲಂ ಮಾಡಿ ಬಡ ವ್ಯಾಪಾರಸ್ಥರಿಗೆ ಹಾಗೂ ಜಾತ್ರೆಗಳಿಗೆ ಆಗಮಿಸುವ ಭಕ್ತಾಧಿಗಳಿಗೆ ಆರ್ಥಿಕ ನಷ್ಟ ತಪ್ಪಿಸಲು, ಏಲಂ ಮೊತ್ತವನ್ನು ಕಡಿಮೆ ಮಾಡಿಸಲು ವ್ಯಾಪಾರಿಗಳನ್ನು ಒಟ್ಟುಗೂಡಿಸಲು ಹಿಂದೂ ವ್ಯಾಪಾರಸ್ಥರ ಸಂಘ ತಲೆಯೆತ್ತಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ‘ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ(ರಿ.), ನೋಂದಾಯಿತವಾಗಿದ್ದು, ಇದರ ನೋಂದಣಿ ಪತ್ರವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರ ಪುತ್ತೂರಿನ ‘ಪುತ್ತಿಲ ಪರಿವಾರ’ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.
ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಗಣೇಶ್, ಖಜಾಂಜಿ ಗೋವಿಂದದಾಸ್, ಪೃಥ್ವಿರಾಜ್, ಮಹೇಶ್ ಉಪಸ್ಥಿತರಿದ್ದರು.
ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರ ಬೃಹತ್ ಸಮಾವೇಶ ಏರ್ಪಡಿಸಿ ಸರ್ಕಾರಕ್ಕೆ ಹಕ್ಕೋತ್ತಾಯ ನೀಡಲು ನಿರ್ಣಯಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಗಣೇಶ್ ತಿಳಿಸಿದ್ದಾರೆ.