ಬೆಂಗಳೂರು: ಸಿಇಟಿ ಫಲಿತಾಂಶ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್, ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಹಾಗೂ ಕೆಇಎ ಬೋರ್ಡ್ ನಿರ್ದೇಶಕಿ ರಮ್ಯಾ ಮಾಧ್ಯಮಗೋಷ್ಠಿಯಲ್ಲಿ ಭಾಗಿಯಾಗಿದ್ದರು.
ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್ ಸಿಇಟಿ ಫಲಿತಾಂಶ ಬಿಡುಗಡೆ ಮಾಡಿದರು.
ಈ ವರ್ಷದ ಸಿಇಟಿ ಪರೀಕ್ಷೆಯನ್ನು 2,44,345 ವಿದ್ಯಾರ್ಥಿಗಳು ಬರೆದಿದ್ದರು. ಇಂಜಿನಿಯರಿಂಗ್ ಕೋರ್ಸ್ನಲ್ಲಿ 2,03,381 ರ್ಯಾಂಕ್ ಪಡೆದುಕೊಂಡಿದ್ದಾರೆ. ಕೃಷಿ ವಿಜ್ಞಾನ 1,64,187 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.
ಪಶುಸಂಗೋಪನೆಯಲ್ಲಿ 1,66,756 ವಿದ್ಯಾರ್ಥಿಗಳು ಅರ್ಹರಾಗಿದ್ದು ಯೋಗ ಹಾಗೂ ನ್ಯಾಚುರೋಪತಿ 1,66,746 ಪಾಸ್ ಆಗಿದ್ದಾರೆ. ಬಿ.ಪಾರ್ಮ್ ಕೋರ್ಸ್ಗೆ 2,06,191 ವಿದ್ಯಾರ್ಥಿಗಳು ಅರ್ಹರಾಗಿದ್ದು, ಒಟ್ಟು 1,68,808 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.
ಮೇ 21 , 22 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಈಗಾಗಲೇ ಕೀ ಉತ್ತರಗಳನ್ನ ಕೆಇಎ ಇಲಾಖೆ ಪ್ರಕಟ ಮಾಡಿದೆ. ಇನ್ನು 2 ಲಕ್ಷದ 39 ಸಾವಿರದ 716 ಜನ ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದರು. ಇದರಲ್ಲಿ ಶೇಕಡಾ 93 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.


























