ಪುತ್ತೂರು : ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದ ಎದುರು ಗದ್ದೆಯಲ್ಲಿ ಜು.23 ರಂದು ಕಟ್ಟೆ ಪ್ರೆಂಡ್ಸ್ ಬಲ್ನಾಡು ಇದರ ವತಿಯಿಂದ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಹಿಂದೂ ಬಾಂಧವರ ಕ್ರೀಡಾಕೂಟ – 2023 ಕೆಸರ್ ಡ್ ಒಂಜಿ ದಿನ ನಡೆಯಲಿದೆ.
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಅಧ್ಯಕ್ಷರಾದ ಮಾಧವ ಗೌಡ ಕಾಂತಿಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕರಾದ ರವಿ ನೆಲ್ಲಿತ್ತಾಯರು ದೀಪ ಪ್ರಜ್ವಲಿಸಲಿದ್ದು, ಪ್ರಗತಿಪರ ಕೃಷಿಕರಾದ ಮುತ್ತಪ್ಪ ಗೌಡ ಕಾಂತಿಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪುತ್ತೂರು ನಗರ ಸಭಾ ಸದಸ್ಯರಾದ ಪೂರ್ಣಿಮ ಚೆನ್ನಪ್ಪ ಗೌಡ, ಬಲ್ನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ (ರಿ) ನ ಅಧ್ಯಕ್ಷರಾದ ಸತೀಶ್ ವಳಗುಡ್ಡೆ, ಬಲ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಇಂದಿರ ಎಸ್.ರೈ, ಉಪಾಧ್ಯಕ್ಷರಾದ ಪರಮೇಶ್ವರಿ ಭಟ್ ಬಬ್ಬಿಲಿ, ಸದಸ್ಯರಾದ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಗಣೇಶ್ ಬಿ, ಕೃಷ್ಣಪ್ಪ ನಾಯ್ಕ ಆಂಬಟೆಮೂಲೆ, ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನ ಅರ್ಚಕರಾದ ಸೂರ್ಯನಾರಾಯಣ ಭಟ್, ಪುತ್ತೂರು ನಗರ ಸಭೆ ಮಾಜಿ ಅಧ್ಯಕ್ಷರಾದ ಜಯಂತಿ ಬಲ್ನಾಡು, ಪ್ರಗತಿಪರ ಕೃಷಿಕ ಸುರೇಶ್ ಭಟ್ ಬಾಯರು, ಬಲ್ನಾಡುಪ್ರಾಥಮಿಕ ಕೃಷಿಪತ್ತಿನ ಸಹಾಕಾರಿ ಸಂಘ (ರಿ)ದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಸೀತಾರಾಮ ಗೌಡ ಕಾಂತಿಲ ಹಾಗೂ ಉದ್ಯಮಿ ರಾಮಚಂದ್ರ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ ಚನಿಲ, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ, ಕಹಳೆ ನ್ಯೂಸ್ ನ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ್ ಹೊಸಮೂಲೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಯುವ ವಾಹಿನಿ ಪುತ್ತೂರು ಘಟಕದ ಮಾಜಿ ಅಧ್ಯಕ್ಷರಾದ ಜಯಂತ್ ಬಾಯಾರು, ಪಿಡಬ್ಯು ಕಾಂಟ್ರಕ್ಟರ್ ಬಾಲಕೃಷ್ಣ ಕಪ್ಪೆಕೆರೆ, ಉದ್ಯಮಿ ಉಜ್ವಲ್ ಪ್ರಭು, ಸರಕಾರಿ ಆಸ್ಪತ್ರೆ ವೈದ್ಯ ಡಾ. ಅಜಯ್ ಕುಮಾರ್, ಆನಂದ ಸುವರ್ಣ, ಬಲ್ನಾಡು ವಿನಾಯಕ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷರಾದ ಗಿರೀಶ್ ಕಂಟ್ರಾಣಿಮೂಲೆ, ಬಲ್ನಾಡು ಭಟ್ಟಿ ವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಯಶವಂತ ಗೌಡ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
























