ಕೊರೋನಾ ಸಂಕಷ್ಟದಿಂದ ಕಂಗೆಟ್ಟಿರುವ ಕೇರಳದ ಜನತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುಡ್ ನ್ಯೂಸ್ ನೀಡಿದ್ದಾರೆ. ಎರಡು ತಿಂಗಳ ಕಾಲ ಬಾಕಿ ಇರುವ ವಿದ್ಯುತ್ ಹಾಗೂ ನೀರಿನ ಬಿಲ್ ವಸೂಲಿ ಮಾಡದಂತೆ ಆದೇಶಿಸಿದ್ದಾರೆ.
ಅಲ್ಲದೇ ಬ್ಯಾಂಕಿಂಗ್ ವಲಯವೂ ಕೂಡ ಸಾಲಗಾರರಿಂದ ಸಾಲ ವಸೂಲಿಗೆ ಇಳಿಯದಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇನ್ನೂ ಮನೆಯಿಂದ ಹೊರಹೋಗಲಾಗದ ಅಸಹಾಯಕರು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡುವ ಮೂಲಕ ಔಷಧಿಗಳನ್ನು ತರಿಸಿಕೊಳ್ಳಬಹುದಾಗಿದೆ. ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೂಲಕ ಕೋವಿಡ್ ಜಾಗೃತಿ ಮೂಡಸಲಿದ್ದಾರೆ ಎಂದು ವಿಜಯನ್ ತಿಳಿಸಿದ್ದಾರೆ.