ವಿಟ್ಲ : ವೀರಕಂಭ ಗ್ರಾಮದ ಎರ್ಮೆಮಜಲು ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಎರ್ಮೆಮಜಲು ಸರಕಾರಿ ಗುಡ್ಡ ಜಾಗದಲ್ಲಿ ಅಂದರ್-ಬಾಹರ್ ಎಂಬ ಇಸ್ಪೀಟು ಜುಗಾರಿ ಆಟವನ್ನು ಆಡುತ್ತಿದ್ದಾಗ ವಿಟ್ಲ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿ 3 ಜನ ಆರೋಪಿಗಳನ್ನು ಹಾಗೂ ನಗದು ರೂಪಾಯಿ 15,785/- ಮತ್ತು ಸದರಿ ಜುಗಾರಿ ಆಟಕ್ಕೆ ಬಳಸಿದ ವಸ್ತುಗಳನ್ನು ಸ್ಥಳದಲ್ಲಿ ವಶಕ್ಕೆ ಪಡೆದಿದ್ದು, 06 ಜನ ಆರೋಪಿಗಳು ಪರಾರಿಯಾಗಿರುತ್ತಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 133/2023 ಕಲಂ: 87 ಕೆ ಪಿ ಆಕ್ಟ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



























