ವಿಟ್ಲ : ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ (ಮೋನು), ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ, ವಿಟ್ಲ ಕನ್ಯಾನ ನಿವಾಸಿ ಹಮೀದ್ (ಜಲಾಲ್), ಸಾಲೆತ್ತೂರಿನ ಹಮೀದ್ ಎಂಬವರನ್ನು ವಶಕ್ಕೆ ಪಡೆದಿದ್ದು, 5 ಜಾನುವಾರುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ: 5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020 ಹಾಗೂ 11(1)(ಎ),11(1)(ಡಿ) ಪ್ರಾಣಿ ಹಿಂಸೆ ನಿ಼ಷೇಧ ಕಾಯ್ದೆ 1960 ಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.