ಪುತ್ತೂರು : 2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆ ವಿಚಾರದಲ್ಲಿ ದಾಖಲಾದ ಪ್ರಕರಣವನ್ನು ನ್ಯಾಯಲಯ ಖುಲಾಸೆಗೊಳಿಸಿ ಆದೇಶಿಸಿದೆ.
ಅರುಣ್ ಕುಮಾರ್ ಪುತ್ತಿಲ, ಅಶೋಕ್ ಕುಮಾರ್ ಪುತ್ತಿಲ, ಶ್ರೀಕಾಂತ್ ಆಚಾರ್ ಹಿಂದಾರ್ ದೋಷಮುಕ್ತರೆಂದು ನ್ಯಾಯಾಲಯ ಆದೇಶ ನೀಡಿದೆ.
ವಕೀಲರಾದ ದೇವಾನಂದ ಕೆ, ಚಿನ್ಮಯ್ ರೈ ಈಶ್ವರಮಂಗಲ,ಹರಿಣಿ ವಾದಿಸಿದರು.
2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ಹಲ್ಲೆ ನಡೆಸಿದ್ದಾರೆಂದು ತಾಲೂಕು ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಕಣ್ಣರಾಯ ರವರು ದೂರು ನೀಡಿದ್ದು, ನಳಿನೀ ಲೋಕಪ್ಪ ಗೌಡ ಮತ್ತು ಲೋಕಪ್ಪ ಗೌಡ ಮುಖ್ಯ ಸಾಕ್ಷಿದಾರರಾಗಿದ್ದರು.
ಇದು ಸತ್ಯ ಮತ್ತು ನ್ಯಾಯಕ್ಕೆ ಸಂದ ಗೌರವ ಎಂದು ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ.


























