ಪ್ರೀತಿ ಎಂದರೆ ಒಂದು ಸುಂದರ ಭಾವ., ಕೆಲವೊಂದು ಪೋಷಕರು ಪ್ರೀತಿ ಎಂದರೆ ದ್ವೇಷ ಮಾಡೋದು ಇದೆ ಮತ್ತು ಪ್ರೀತಿಯಿಂದ ಜೀವವೇ ಹೋದ ಘಟನೆಗಳು ನಡೆಯುತ್ತಿದೆ. ಪಾಗಲ್ ಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನೇ ಕೊಲೆ ಮಾಡಿರುವ ಘಟನೆ ದ.ಕ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಮೃತ ಯುವತಿ
ಜೀವನದಲ್ಲಿ ಬಾಳಿ ಬದುಕಿ ಸುಂದರ ಕ್ಷಣಗಳನ್ನು ಅನುಭವಿಸಬೇಕಿದ್ದ ಮುಗ್ದ ಜೀವವೊಂದು ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ದುರಂತ ಅಂತ್ಯ ಕಂಡಿದೆ.
ನಿನ್ನೆ ಮಧ್ಯಾಹ್ನ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಪಕ್ಕದಲ್ಲೇ ಚೂರಿಯಿಂದ ಇರಿದು ಯುವಕನೋರ್ವ ಯುವತಿಯ ಹತ್ಯೆ ಮಾಡಿದ್ದು, ಕೊಲೆಯಾದ ಯುವತಿಯ ಅಂತ್ಯಕ್ರಿಯೆಯು ಇಂದು ಕೇಪು ಸ್ಮಶಾನದಲ್ಲಿ ನಡೆಯಿತು.

ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿಗಳಾಗಿರುವ ಬಡ ಕುಟುಂಬದ ವಿಜಯನ್ ಮತ್ತು ಸೀತಾ ದಂಪತಿಯ ಪುತ್ರಿ ಗೌರಿ (18) ಕೊಲೆಯಾದ ಯುವತಿ.

ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿ ಪದ್ಮರಾಜು (24) ಕೊಲೆ ಆರೋಪಿ

ಆರೋಪಿ ಪದ್ಮರಾಜ್
.

ಮೃತ ಯುವತಿ ಗೌರಿಯ ಮನೆ
ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ ಎಂಬ ಯುವತಿ ನಿನ್ನೆ ಕೂಡಾ ಕೆಲಸಕ್ಕೆಂದು ಬಂದಿದ್ದಳು. ಈ ನಡುವೆ ಈಕೆಯನ್ನು ನಗರದ ಬಸ್ ನಿಲ್ದಾಣದ ಬಳಿ ನಾಲ್ಕು ವರ್ಷದಿಂದ ಪರಿಚಿತನಾಗಿರುವ ಪದ್ಮರಾಜ್ ಎಂಬ ಯುವಕ ಭೇಟಿಯಾಗಿದ್ದ.

ಈ ಸಂದರ್ಭ ಇವರಿಬ್ಬರ ನಡುವೆ ವಿಚಾರವೊಂದಕ್ಕೆ ಮಾತಿನ ಚಕಮಕಿ ನಡೆದಿದೆ. ಹೀಗಾಗಿ ಯುವತಿ ಈ ಬಗ್ಗೆ ದೂರು ನೀಡಲೆಂದು ಪುತ್ತೂರು ಮಹಿಳಾ ಠಾಣೆ ಬಳಿ ಬಂದಿದ್ದಾಳೆ. ಆದ್ರೆ ಈಕೆಯನ್ನು ಬೆನ್ನತ್ತಿ ಬಂದ ಆರೋಪಿ ಪದ್ಮರಾಜ್ ಠಾಣೆಯ ಹೊರ ಭಾಗದಲ್ಲೇ ಚೂರಿಯಿಂದ ಗೌರಿಯ ಕುತ್ತಿಗೆಯ ಭಾಗಕ್ಕೆ ಇರಿದು ಬೈಕ್ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಚಾರ ತಿಳಿದ ಸ್ಥಳೀಯರು ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಘಟನೆ ನಡೆಯುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಪೊಲೀಸರು ಬೈಕ್ನ ಆಧಾರದಲ್ಲಿ ಆರೋಪಿಯ ಪೂರ್ವಾಪರ ವಿಚಾರಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.


ಯುವತಿ ಗೌರಿಯ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ಕೇಪು ಬಳಿಯ ಸ್ಮಶಾನದಲ್ಲಿ ನಡೆದಿದ್ದು, ಕುಟುಂಬಸ್ಥರ ಸಹಿತ ಹಲವರು ಈ ವೇಳೆ ಉಪಸ್ಥಿತರಿದ್ದರು. ಮನೆಗೆ ಆಧಾರವಾಗಿದ್ದ ಮಗಳನ್ನು ಕಳೆದುಕೊಂಡ ಕುಟುಂಬ ಇದೀಗ ಶೋಕ ಸಾಗರದಲ್ಲಿ ಮುಳುಗಿದೆ..


























