ಉಡುಪಿ : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚಿಸಿರೋ ಕೇಸ್ನಲ್ಲಿ ಚೈತ್ರಾ ಕುಂದಾಪುರ ಅವರನ್ನ ಅರೆಸ್ಟ್ ಮಾಡಲಾಗಿದೆ. ಸಿಸಿಬಿ ತನಿಖೆ ಆರಂಭವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಚೈತ್ರಾ ಕುಂದಾಪುರ ಅವರ ತಾಯಿ ರೋಹಿಣಿ ಅವರು ಪ್ರತಿಕ್ರಿಯೆ ನೀಡಿದ್ದು, ನನ್ನ ಮಗಳು ಇನ್ನೊಬ್ಬರ ಮನಸಿಗೆ ನೋವು ಮಾಡುವವಳಲ್ಲ. ಯಾರೋ ಆಕೆಯನ್ನು ಮುಂದಿಟ್ಟುಕೊಂಡು ಈ ಕೆಲಸ ಮಾಡಿಸಿದ್ದಾರೆ. ಅವಳದ್ದು ನೇರವಾಗಿ ಮಾತನಾಡುವ ಪ್ರವೃತ್ತಿ, ತಪ್ಪು ಮಾಡವ ಪ್ರವೃತ್ತಿಯಲ್ಲ. ಅವಳ ಮೇಲೆ ನನಗೆ ನಂಬಿಕೆ ಇದೆ. ಅವಳು ತಪ್ಪು ಮಾಡಿಲ್ಲ ಎಂದು ತಮ್ಮ ಮಗಳ ಬಗ್ಗೆ ರೋಹಿಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚೈತ್ರಾ ಅರೆಸ್ಟ್ ಆಗಿರುವ ಬಗ್ಗೆ ನನ್ನ ದೊಡ್ಡ ಮಗಳು ಮಾಹಿತಿ ನೀಡಿದ್ದಳು. ಮನೆಯಲ್ಲಿ ಚೈತ್ರಾ ನಮಗೆ ಯಾವುದೇ ರೀತಿಯ ಟೆನ್ಶನ್ ನೀಡುತ್ತಿರಲಿಲ್ಲ. ಚೈತ್ರಾ ಹೊಸ ಕಾರು ಖರೀದಿಸಿದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಬ್ಯಾಂಕ್ನಲ್ಲಿ ಒಂದು ಲೋನ್ ಇದೆ ಎನ್ನುವ ಮಾಹಿತಿ ಇದೆ. ಆದರೆ ಅದು ಯಾವುದು ಅಂತ ಗೊತ್ತಿಲ್ಲ. ವಾರದ ಹಿಂದೆ ಕುಂದಾಪುರದ ಮನೆಯಲ್ಲೇ ನನ್ನ ಪುತ್ರಿ ಚೈತ್ರಾ ಇದ್ದಳು. ಯಾವುದಾದರೂ ಕಾರ್ಯಕ್ರಮಕ್ಕೆ ಕರೆದಾಗ ಎಲ್ಲರ ಜೊತೆ ಹೋಗ್ತಿದ್ದಳು. ವಾರದ ಹಿಂದೆ ಇಲ್ಲಿಂದ ತೆರಳಿದವಳು ಅರೆಸ್ಟ್ ಆಗಿದ್ದಾಳೆ.
ಅರೆಸ್ಟ್ ಆದ ಬಳಿಕ ನಿನ್ನೆ ಎರಡು ಗಂಟೆಯ ಹೊತ್ತಿಗೆ ನನಗೆ ಪೊಲೀಸ್ ಮೂಲಕ ಕರೆ ಮಾಡಿದ್ದಳು. ಏನಾಗುವುದಿಲ್ಲ, ಆರಾಮವಾಗಿರು ಔಷಧಿ ತೆಗೆದುಕೊಳ್ಳಿ ಎಂದಿದ್ದಳು. ಅವಳ ಬಗ್ಗೆ ನನಗೆ ನಂಬಿಕೆ ಇದೆ. ಇನ್ನೊಬ್ಬರ ಮನಸಿಗೆ ನೋವು ಮಾಡದ ವ್ಯಕ್ತಿತ್ವ ಅವಳದ್ದು. ಯಾರೋ ಆಕೆಯನ್ನು ಮುಂದಿಟ್ಟುಕೊಂಡು ಈ ಕೆಲಸ ನಡೆಸಿದ್ದಾರೆ. ನೇರವಾಗಿ ಮಾತನಾಡುವ ಪ್ರವೃತ್ತಿ ಅವಳದ್ದು, ತಪ್ಪು ಮಾಡಲುವ ಪ್ರವೃತ್ತಿಯಲ್ಲ. ಇಂತಹ ಕೃತ್ಯದಲ್ಲಿ ಭಾಗಿಯಾಗುವ ಕುಟುಂಬ ನಮ್ಮದಲ್ಲ ಎಂದು ಕುಂದಾಪುರದಲ್ಲಿ ಚೈತ್ರಾ ಕುಂದಾಪುರ ಅವರ ತಾಯಿ ರೋಹಿಣಿ ಹೇಳಿದರು.


























