ಸುಬ್ರಹ್ಮಣ್ಯ : ಅಕ್ರಮ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಐವತ್ತೊಕ್ಲು ಕುಳ್ಳಕೋಡಿಯಲ್ಲಿ ನಡೆದಿದೆ.

ಸೆ.24 ರಂದು ರಾತ್ರಿ ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು. ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದರು.
ಈ ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಪೊಲೀಸರು ರೂ 20,000/- ಮೌಲ್ಯದ ಜಾನುವಾರುಗಳನ್ನು ಹಾಗೂ ಅಂದಾಜು 2,00,000 ರೂ. ಮೌಲ್ಯದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























