ಮಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ದ.ಕ. ಜಿಲ್ಲಾದ್ಯಂತ ತಂಬಾಕು ಮತ್ತು ಪಾನ್ ಮಸಾಲ (ಬೀಡಿ, ಸಿಗರೇಟ್) ಜರ್ದಾ, ಖೈನಿ ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಉಲ್ಲಂಘಿಸಿ ಅವುಗಳನ್ನು ಮಾರಾಟ ಮಾಡಿದರೆ ಅಥವಾ ಬಳಕೆ ಮಾಡಿದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.