ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಆಶ್ರಯದಲ್ಲಿ
ಎಸ್ ಡಿ ಎಂ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು, ಉಜಿರೆಯ ನಿವೃತ್ತ ಪ್ರಾಂಶುಪಾಲರು ಹಾಗೂ ಜೆ.ಸಿ. ಐ. ನ ರಾಷ್ಟ್ರೀಯ ತರಬೇತುದಾರರಾದ ಡಾ. ಕೃಷ್ಣಮೂರ್ತಿ ಟಿ ಅವರು ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಕುರಿತು ವಿಶೇಷ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಸದಸ್ಯರಾದ ಪದ್ಮಯ್ಯ ಗೌಡ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿ, ಉಪನ್ಯಾಸಕಿ ಸಂಪಾವತಿ ಅತಿಥಿಗಳನ್ನು ಪರಿಚಯಿಸಿದರೆ, ಕುಮಾರಿ ಪೂರ್ಣಿಮಾ ವಂದಿಸಿದರು. ಉಪನ್ಯಾಸಕ ಚಂದ್ರಕಾಂತ ಕಾರ್ಯಕ್ರಮ ನಿರೂಪಿಸಿದರು.

























