ಪುತ್ತೂರು : ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ ವೇಳೆ ಮೇಲ್ಛಾವಣಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಶೇಖರ್ ಕುಲಾಲ್ ರವರ ಸಹೋದರ ದಿನೇಶ್ ಕುಲಾಲ್ ನೀಡಿರುವ ದೂರಿನ ಮೇರೆಗೆ ಕಾಂಟ್ರಾಕ್ಟರ್ ಸಂಜೀವ ಹಾಗೂ ಮನೆ ಮಾಲಕರಾದ ಕಮಲ ರವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶೇಖರ್ ಕುಲಾಲ್ ಎಂಬವರು ಅ.25 ರಂದು ಬೆಳಿಗ್ಗೆ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ, ಪಾದಲಾಡಿ ಎಂಬಲ್ಲಿ ಕಮಲ ಎಂಬವರ ಮನೆಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದು, ಸದ್ರಿ ಮನೆಯ ಸಿಟೌಟ್ ನ ಮೇಲ್ಛಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಮೇಲ್ಚಾವಣೆ ಕುಸಿದು ಬಿದ್ದು ಶೇಖರ್ ಕುಲಾಲ್ ಹಾಗೂ ಕಾಂಟ್ರಾಕ್ಟರ್ ಸಂಜೀವ ಎಂಬವರು ಗಾಯಗೊಂಡಿರುತ್ತಾರೆ.
ಅವರುಗಳ ಪೈಕಿ ಗಂಭೀರವಾಗಿ ಗಾಯಗೊಂಡ ಶೇಖರ್ ಕುಲಾಲ್ ರವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮೃತಪಟ್ಟಿರುತ್ತಾರೆ. ಸದರಿ ಅವಘಡಕ್ಕೆ ಸರಿಯಾಗಿ ಕ್ಯೂರಿಂಗ್ ಆಗದಿರುವ ಸ್ಥಳದಲ್ಲಿ ಕೆಲಸ ಮಾಡುವುದು ಜೀವಕ್ಕೆ ಅಪಾಯ ಎಂದೂ ತಿಳಿದಿದ್ದರೂ ಕೂಡಾ ಶೇಖರ್ ಕುಲಾಲ್ ರವರನ್ನು ಕೆಲಸ ಮಾಡಿಸಿದ ಕಾಂಟ್ರ್ಯಾಕ್ಟರ್ ಸಂಜೀವ ಹಾಗೂ ಮನೆಯ ಮಾಲಕರಾದ ಕಮಲ ರವರ ನಿರ್ಲಕ್ಷ್ಯತನವೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 103/2023 ಕಲo: 304(A) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























