ಪುತ್ತೂರು : ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪುಸ್ತಕಗಳನ್ನು ಇಟ್ಟು ವಿದ್ಯಾ ಸರಸ್ವತಿ ಮಾತೆಗೆ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ ಪೂಜಾ ವಿಧಾನವನ್ನು ನೆರವೇರಿಸಿ ಮಾತನಾಡಿ ಪುಸ್ತಕವನ್ನು ಪೂಜಿಸುವುದು ಮಾತ್ರವಲ್ಲ ಅದರಲ್ಲಿರುವ ಜ್ಞಾನವನ್ನು ಪಡೆದು ಉತ್ತಮ ವಿದ್ಯಾರ್ಥಿಗಳಾಗಬೇಕೆಂದು ಆಶೀರ್ವದಿಸಿದರು.

ನಂತರ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು ಹಾಗೂ ಪ್ರಸಾದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಜಯಮಾಲಾ ವಿ.ಎನ್., ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


























