ಸುಳ್ಯ : ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗುತ್ತಿಗಾರಿನಲ್ಲಿ ನಡೆದಿದೆ.
ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.
ಸೈಬಿನ್ ನಿನ್ನೆ ಗುತ್ತಿಗಾರು ಪೇಟೆಗೆ ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ವರದಿಯಾಗಿದೆ.
Advertisement
Advertisement























