ಉಪ್ಪಿನಂಗಡಿ : ರಾಜಧಾನಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮಾರಾಟ ಅಂಗಡಿಯಿಂದ ಹಾಡಹಗಲೇ ಒಂದು ಲಕ್ಷ ರೂ. ಹಣವನ್ನು ಕದ್ದೊಯ್ದ ಘಟನೆ ನಡೆದಿದೆ.
ಅಡಿಕೆ ವ್ಯಾಪಾರಿ ಮಧ್ಯಾಹ್ನ ಊಟಕ್ಕೆಂದು ಹೋಗುವ ವೇಳೆ ಕ್ಯಾಶ್ ಡ್ರಾವರ್ಗೆ ಬೀಗ ಹಾಕಿ, ಅಂಗಡಿಯ ಶಟರ್ ಅನ್ನು ಅರ್ಧ ಎಳೆದು ಹೋಗಿದ್ದರು.
ವಾಪಸ್ ಬರುವ ವೇಳೆಗೆ ಕ್ಯಾಶ್ ಡ್ರಾವರ್ ತೆರೆಯಲ್ಪಟ್ಟಿದ್ದು, ಕಳ್ಳರು ಒಂದು ಲಕ್ಷ ರೂ. ನಗದನ್ನು ಕದ್ದೊಯ್ದಿರುವುದು ಗಮನಕ್ಕೆ ಬಂದಿದೆ. ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.

























