ಬೆಂಗಳೂರು: ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆಯಾಗಿದೆ. ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಶಾಸಕರ ಅಭಿಪ್ರಾಯ ಪಡೆದು ದೆಹಲಿಯಿಂದ ಬಂದಿದ್ದ ವೀಕ್ಷಕರು ಅಶೋಕ್ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದು 6 ತಿಂಗಳಾದ್ರೂ ವಿರೋಧ ಪಕ್ಷ ನಾಯಕ ಆಯ್ಕೆಯಾಗಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ ಬಳಿಕ ಇದೀಗ ವಿಪಕ್ಷ ನಾಯಕನ ಆಯ್ಕೆಯನ್ನು ಬಿಜೆಪಿ ಹೈಕಮಾಂಡ್ ಮಾಡಿ ಮುಗಿಸಿದೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಈ ಸಮಯದಲ್ಲಿ ರಾಜ್ಯ ಬಿಜೆಪಿ ವಿಜಯೇಂದ್ರ ಹಾಗೂ ಅಶೋಕ್ ಅವರಿಗೆ ಮಹತ್ವದ ಹೊಣೆಗಾರಿಕೆಯನ್ನು ನೀಡಿದೆ.

























