ಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು ಹಾಗೂ ಪಕ್ಷ ಸಂಘಟನೆಗಾಗಿ, ಸೂಕ್ತ ಸಲಹೆ ಸೂಚನೆ ನೀಡಿ ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳುವುದಕ್ಕಾಗಿ ಬೆಳ್ತಂಗಡಿ ನಗರ ಬ್ಲಾಕ್ ಗೆ ಚುನಾವಣೆ ವೀಕ್ಷಕರಾಗಿ ಎಚ್ ಮಹಮ್ಮದ್ ಅಲಿಯವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.
ಮಹಮ್ಮದ್ ಅಲಿ ಯವರು ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಹಾಗೂ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.