ಬೆಂಗಳೂರು : ಕಂಬಳದ ಕರೆ ಮತ್ತು ವ್ಯವಸ್ಥೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೀಕ್ಷಿಸಿದರು.

ಇತಿಹಾಸದಲ್ಲೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದರಾದ ಶೋಭ ಕರಂದ್ಲಾಜೆ ಕರೆಯನ್ನು ವೀಕ್ಷಿಸಿದರು.

ಸಚಿವೆ ಕೋಣದ ಮಾಲಕರೊಂದಿಗೆ ಮಾತುಕತೆ ನಡೆಸಿ ಕೋಣಗಳ ಜೊತೆ ಪೋಟೋ ತೆಗೆದುಕೊಂಡರು.

ಈ ಸಂದರ್ಭ ಬೆಂಗಳೂರು ಕಂಬಳ ಸಮಿತಿಯ ಪದಾಧಿಕಾರಿಗಳು ಹಾಗೂ ಕಂಬಳದ ಅಭಿಮಾನಿಗಳು ಉಪಸ್ಥಿತರಿದ್ದರು.


























