ವಾರಣಾಸಿ : ಹಿಂದೂ ಧರ್ಮದವರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ವಾರಣಾಸಿಯ ನ್ಯಾಯಾಲಯವು ಬುಧವಾರ ಅನುಮತಿ ನೀಡಿದೆ.
ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶವಾದ ‘ವ್ಯಾಸ್ ಜೀ ಕಾ ತಹಖಾನಾ’ದಲ್ಲಿ ಹಿಂದೂ ಭಕ್ತರು ಈಗ ಪ್ರಾರ್ಥನೆ ಸಲ್ಲಿಸಬಹುದು. ಹಿಂದಿನ ದಿನದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಮುಂದಿನ ಏಳು ದಿನಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, ‘ವ್ಯಾಸ್ ಕಾ ತಹಖಾನಾ’ದಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಲಾಗಿದೆ. ಜಿಲ್ಲಾಡಳಿತವು 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗಿದೆ. ಈಗ ಎಲ್ಲರಿಗೂ ಪೂಜೆ ಮಾಡುವ ಹಕ್ಕು ಇದೆ ಎಂದು ಹೇಳಿದ್ದಾರೆ.


























