Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

‘ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ’ – ಸಿಎಂ

February 16, 2024
in ಮಂಗಳೂರು, ರಾಜಕೀಯ, ರಾಜ್ಯ
0
‘ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ’ – ಸಿಎಂ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 15 ನೇ ಬಜೆಟ್‌ ಮಂಡನೆ ಮಾಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement
Advertisement

ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು. ಇನ್ನು ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುವ ಗುರಿ ಇದೆ ಎಂದು ಸಿಎಂ ತಿಳಿಸಿದರು.

ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

Advertisement

ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿಗೊಳಿಸುವ ಯೋಜನೆಯಿದೆ ಎಂದರು.

4,200 ಕೋಟಿ ರೂಪಾಯಿ ವೆಚ್ಚದಲ್ಲಿ 30 MTPA ಸರ್ವಋುತು ಬಂದರು 

ಬಜೆಟ್​ನಲ್ಲಿ ಬಂದರು ಮತ್ತು ಒಳನಾಡಿನ ಅಭಿವೃದ್ಧಿಗೆ ಸರ್ಕಾರ ಚಿತ್ತಹರಿಸಿದೆ. ರಾಜ್ಯದ 320 ಕಿ.ಮೀಟರ್ ಉದ್ದದ ಕರಾವಳಿ ತೀರಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಮಂದಾಗಿದೆ. ಬಂದರು ಮತ್ತು ರೈಲುಗಳು ವಿಮಾನ ಸಂಪರ್ಕವನ್ನ ಸುಗಮಗೊಳಿಸಲು ಯೋಜನೆ ಹಾಕಿಕೊಂಡಿದೆ. ಹೀಗಾಗಿ ಕೆಲವು ವರ್ಷಗಳಲ್ಲಿ ಅಂದಾಜು 20 ಸಾವಿರ ಕೋಟಿ ಹೂಡಿಕೆ ಮಾಡುವ ಗುರಿಯನ್ನು ಸಿದ್ದರಾಮಯ್ಯ ಸರ್ಕಾರ ಹೊಂದಿದೆ.

2024-2025ನೇ ಸಾಲಿನ ಬಜೆಟ್​ನಲ್ಲಿ ಸಮುದ್ರ ಸಾರಿಗೆ, ಸರಕು ಸಾಗಣೆ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಒತ್ತು ನೀಡಿದೆ. ರಾಜ್ಯದ ಜಲ ಸಾರಿಗೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹೂಡಿಕೆ ಮಾಡಲು ಮುಂದಾಗಿದೆ. ಖಾಸಗಿ ಹೂಡಿಕೆಗಳನ್ನ ಆಕರ್ಷಿಸಲು ಕರ್ನಾಟಕ ಜಲಸಾರಿಗೆ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ.

ಇನ್ನು ಸಾಗರ ಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಆದ್ಯತೆ ನೀಡಿದೆ. ಅಂದಾಜು 1,017 ಕೋಟಿ ವೆಚ್ಚದಲ್ಲಿ 26 ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ. ಇನ್ನೂ 1,145 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಯೋಜನಾ ವರದಿ ತಯಾರಿಸಿದೆ. 12 ಕಾಮಗಾರಿಗಳ ವರದಿಗಳನ್ನ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸರ್ವಋುತು ಬಂದರು ನಿರ್ಮಾಣ ಮಾಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ. 4,200 ಕೋಟಿ ವೆಚ್ಚದಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು ನಿರ್ಮಿಸುವುದಾಗಿ ಹೇಳಿದೆ. ಇದಲ್ಲದೆ, ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಎರಡನೇ ಬೃಹತ್ ಬಂದರು ನಿರ್ಮಾಣ. ಪಿಪಿಪಿ ಮಾದರಿಯಲ್ಲಿ ಅಂದಾಜು 3,048 ಕೋಟಿ ವೆಚ್ಚದಲ್ಲಿ ಬಂದರು ಅಭಿವೃದ್ಧಿ ಮಾಡಲು ಚಿಂತಿಸಿದೆ.

ಕಾರವಾರ, ಮಲ್ಪೆ, ಹಳೇ ಮಂಗಳೂರು ಬಂದರುಗಳಲ್ಲಿ 4 ಬರ್ತ್ ಅಭಿವೃದ್ಧಿ ಮಾಡುವುದಾಗಿ ತಿಳಿಸಿದೆ. ಕಾರವಾರ, ಹಳೇ ಮಂಗಳೂರು ಸೇರಿ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಮಾಡಲಿದೆ. ಉತ್ತರಕನ್ನಡದ ಮಂಕಿಯಲ್ಲಿ ವಿವಿದೋದ್ದೇಶ ಬಂದರು ಅಭಿವೃದ್ಧಿ ಬಗ್ಗೆ ಚಿಂತಿಸಿದೆ. ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆಗೆ ಕಾಮಗಾರಿ ಮಾಡುವುದಾಗಿ ಸರ್ಕಾರ ತಿಳಿಸಿದೆ.

ಇನ್ನು ಹಳೇ ಮಂಗಳೂರು ಬಂದರಿನಲ್ಲಿ 350 ಮೀ ಉದ್ದದ ಕೋಸ್ಟರ್ ಬರ್ತ್‌ ನಿರ್ಮಾಣ ಮತ್ತು 2024-25ರಲ್ಲೇ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್‌ ಮತ್ತು ಬಂದರು ನಿರ್ಮಾಣ ಮಾಡಲಿದೆ. ಐಐಟಿ ಮದ್ರಾಸ್ ಸಹಯೋಗದೊಂದಿಗೆ ಪ್ರವಾಸೋದ್ಯಮ ಬಂದರು ಅಬಿವೃದ್ಧಿ ಮಾಡಲಿದೆ. ಮಂಗಳೂರಿನ ಗುರುಪುರು, ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆ ನಿರ್ಮಾಣ ಮಾಡುವುದಾಗಿ ಈ ಬಾರಿಯ ಬಜೆಟ್​ನಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಪ್ರಗತಿ ಮೇಲ್ವಿಚಾರಣೆ, ಅಂತರ್ ಇಲಾಖಾ ತೊಡಕು ಬಗೆಹರಿಸಲು ಕ್ರಮವಹಿಸುವುದಾಗಿ ಸಿಎಂ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ತಿಳಿದಿದ್ದಾರೆ. ರಾಜ್ಯದಲ್ಲಿ ಮೂಲ ಸೌಕರ್ಯ ಯೋಜನೆಗಳ ಪ್ರಗತಿಗೆ ಪ್ರತ್ಯೇಕ ಘಟಕ ಸ್ಥಾಪಿಸುವುದಾಗಿ ಹೇಳಿದ್ದಾರೆ. ಜೊತೆಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕಗಳ ಸ್ಥಾಪಿಸಲಾಗುತ್ತದೆ ಎಂದು ಬಜೆಟ್​ನಲ್ಲಿ ಹೇಳಿದ್ದಾರೆ.

ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ ಮೀಸಲು

ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ ಮೀಸಲಿಟ್ಟಿರೋದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ನೀಡೋದಾಗಿ ಹೇಳಿದ್ದಾರೆ.

ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಸ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸುವ ಭರವಸೆಯನ್ನು ನೀಡಿದ್ದಾರೆ. ವಕ್ಫ್​ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸೋದಾಗಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದಿದ್ದಾರೆ. ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಭರವಸೆ ನೀಡಿದ್ದಾರೆ.

Previous Post

ಗ್ರಾಮೀಣ ಪತ್ರಕರ್ತರ ಕನಸು ನನಸು : ಬಜೆಟ್‍ನಲ್ಲಿ ಉಚಿತ ಬಸ್ ಪಾಸ್ ಘೋಷಣೆ

Next Post

ಏನಿಲ್ಲ.. ಏನಿಲ್ಲ.. ಸುನೀಲನ ತಲೆಯಲ್ಲಿ ಏನಿಲ್ಲ ; ಸಿಎಂ ಯಾಕೆ ಹೀಗಂದ್ರು..!??

OtherNews

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!
Featured

ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

July 3, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
ಕ್ರೈಮ್

ಜೈಲಿಗೆ ಗಾಂಜಾ ಎಸೆದ ಆರೋಪಿಯ ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ..!!

July 3, 2026
ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!
ಕ್ರೈಮ್

ಕಾರಿಗೆ‌ ಡಿಸೇಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವಂಚಕರು ಬೆಂಗಳೂರಿನಲ್ಲಿ ಅರೆಸ್ಟ್‌..!!

July 2, 2026
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!
ಕ್ರೈಮ್

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

July 1, 2026
ಅಶ್ವಿನಿ ಕಣ್ಣೀರೊರೆಸಿದ ನಳಿನ್‌ ಕುಮಾರ್ :₹23 ಲಕ್ಷ ವೆಚ್ಚದ ಕೃತಕ ಕಾಲು: ಲೋಧಾ ಟ್ರಸ್ಟ್ ನೆರವಿಗೆ ಕಟೀಲ್ ಸೇತುವೆ..!!
Featured

ಅಶ್ವಿನಿ ಕಣ್ಣೀರೊರೆಸಿದ ನಳಿನ್‌ ಕುಮಾರ್ :₹23 ಲಕ್ಷ ವೆಚ್ಚದ ಕೃತಕ ಕಾಲು: ಲೋಧಾ ಟ್ರಸ್ಟ್ ನೆರವಿಗೆ ಕಟೀಲ್ ಸೇತುವೆ..!!

July 1, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಹಾವು ಕಂಡು ಬ್ರೇಕ್, ಆಟೋ-ಆಕ್ಟಿವಾ ಡಿಕ್ಕಿ; ಸವಾರ ಗಂಭೀರ..!!

ವಿಟ್ಲ: ಹಾವು ಕಂಡು ಬ್ರೇಕ್, ಆಟೋ-ಆಕ್ಟಿವಾ ಡಿಕ್ಕಿ; ಸವಾರ ಗಂಭೀರ..!!

July 4, 2026
70 ಲಕ್ಷ ಪಡೆದು ಉದ್ಯಮಿಗೆ ವಂಚನೆ, ಹಣ ವಾಪಸ್‌ ಕೇಳಿದ್ರೆ ರೇಪ್‌ ಕೇಸ್‌ ದಾಖಲಿಸೋದಾಗಿ ಬೆದರಿಕೆ – ಮಹಿಳೆ ಅರೆಸ್ಟ್‌..!!!

70 ಲಕ್ಷ ಪಡೆದು ಉದ್ಯಮಿಗೆ ವಂಚನೆ, ಹಣ ವಾಪಸ್‌ ಕೇಳಿದ್ರೆ ರೇಪ್‌ ಕೇಸ್‌ ದಾಖಲಿಸೋದಾಗಿ ಬೆದರಿಕೆ – ಮಹಿಳೆ ಅರೆಸ್ಟ್‌..!!!

July 4, 2026
ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಾಯ..!!

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಾಯ..!!

July 4, 2026
ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

ವಿಟ್ಲ: ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ಲಾರಿಗಳ ವಶ, ಇಬ್ಬರ ವಿರುದ್ಧ ಪ್ರಕರಣ..!!

July 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.