ವಿಟ್ಲ : ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೇಪು ಎಂಬಲ್ಲಿ ನಡೆದಿದೆ.
ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ, ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್ (38) ಮೃತ ಯುವಕ.
![](https://zoomintv.online/wp-content/uploads/2024/02/IMG-20240221-WA0019-1024x682.jpg)
ಅಶ್ರಫ್ ಕಳೆದ ಹಲವಾರು ವರುಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದ ಹಿನ್ನೆಲೆ ಸ್ವದೇಶಕ್ಕೆ ಆಗಮಿಸಿದ್ದರು.
ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಪುತ್ರ, ಪುತ್ರಿ, ತಾಯಿಯನ್ನು ಅಗಲಿದ್ದಾರೆ.