ನವದೆಹಲಿ : ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ಸಿಇಸಿ ಸಭೆ ನಡೆದಿದೆ. ಇಂದು ಬಿಜೆಪಿ 2ನೇ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದ್ದು, ರಾಜ್ಯದ ಮೊದಲ ಲಿಸ್ಟ್ ಅನೌನ್ಸ್ ಆಗಲಿದೆ.
ಮೊದಲ ಹಂತದಲ್ಲಿ 15 ರಿಂದ 17 ಅಭ್ಯರ್ಥಿಗಳ ಘೋಷಣೆ ಆಗುವ ನಿರೀಕ್ಷೆ ಇದೆ. ಬೆಂಗಳೂರು ಗ್ರಾಮಾಂತರಕ್ಕೆ ಡಾ.ಮಂಜುನಾಥ್ ಬಹುತೇಕ ಖಚಿತ ಎನ್ನಲಾಗಿದೆ. ವಿರೋಧದ ನಡುವೆಯೂ ಶೋಭಾ ಕರಂದ್ಲಾಜೆಗೂ ಟಿಕೆಟ್ ಫಿಕ್ಸ್ ಅಂತ ಹೇಳಲಾಗಿದೆ. ಮೈಸೂರಿನಿಂದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಗೆ ಟಿಕೆಟ್ ಡೌಟ್ ಎನ್ನಲಾಗಿದೆ. ಈ ನಡುವೆ ಬೆಂಗಳೂರು ಉತ್ತರ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಬೀದರ್, ರಾಯಚೂರು, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಇನ್ನೂ
ಇತ್ಯರ್ಥವಾಗಿಲ್ಲ ಎನ್ನಲಾಗುತ್ತಿದೆ.
ಕಮಲ ವರಿಷ್ಠರಿಗೆ ಸವಾಲಾಗಿದ್ದ ಅಭ್ಯರ್ಥಿ ಆಯ್ಕೆ ಕಗ್ಗಂಟು ಭಾಗಶ: ಕ್ಲಿಯರ್ ಆಗಿದೆ ಎನ್ನಲಾಗಿದೆ. ವಯಸ್ಸು/ಆರೋಗ್ಯ ಕಾರಣಕ್ಕೆ ಕೆಲ ಸಂಸದರಿಗೆ ಟಿಕೆಟ್ ಕೈ ತಪ್ಪುವುದು ಫಿಕ್ಸ್ ಆಗಿದೆ. ಕೆಲವು ಸಂಸದರ ಕಾರ್ಯಕ್ಷಮತೆ, ನಡೆ-ನುಡಿ ಬಗ್ಗೆ ವರಿಷ್ಠರಿಗೆ ತೃಪ್ತಿ ಇಲ್ಲ. ಇನ್ನು ಐದು ಕ್ಷೇತ್ರಗಳಲ್ಲಿ ಹಾಲಿ ಸಂಸದರಿಂದ ನಿವೃತ್ತಿ ಘೋಷಣೆ. ಕೆಲವು ಸಂಸದರಿಗೆ ಸ್ಥಳೀಯವಾಗಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


























