ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರದ ಪೂರ್ವಸಿದ್ದತೆಗಳನ್ನು ಮಾ.13 ರಂದು ಸುರತ್ಕಲ್ ಎನ್.ಐ.ಟಿ.ಕೆ ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ಜಿಲ್ಲಾಧಿಕಾರಿಗಳಾದ ಎಂ.ಪಿ ಮುಲ್ಲೈ ಮುಹಿಲನ್ ಐ.ಎ.ಎಸ್ ಪರಿಶೀಲನೆ ನಡೆಸಿದರು.


ಈ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಐ.ಪಿ.ಎಸ್ ರವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಐ.ಪಿ.ಎಸ್ ಜೊತೆಗಿದ್ದರು.




























