ಪುತ್ತೂರು : ಟೀಮ್ ಸತ್ಯಜಿತ್ ಸುರತ್ಕಲ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪ್ರಮುಖರ ಸಭೆ ಮಾ.22 ರಂದು ತುಂಬೆಯ ಶಾರದಾ ಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ದಿನಾಂಕ ಈಗಾಗಲೇ ಪ್ರಕಟಗೊಂಡಿದ್ದು, ಚುನಾವಣಾ ಪ್ರಚಾರದಲ್ಲಿ ಪಕ್ಷಗಳು ನಿರತವಾಗಿವೆ. ಈ ಮಧ್ಯೆ ಟೀಮ್ ಸತ್ಯಜಿತ್ ಸುರತ್ಕಲ್ ಪ್ರಮುಖರ ಸಭೆ ಕರೆದಿದ್ದು, ಸಾರ್ವಜನಿಕ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ಟೀಮ್ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ..

























