ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ನಾಳೆಯಿಂದಲೇ ಶುರುವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ನಾಳೆ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಈ ಮುನ್ನವೇ ಫ್ಯಾನ್ಸ್ಗೆ ಬಿಗ್ ಶಾಕ್ ಕಾದಿದೆ.
ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ. ಇವರ ಬದಲಿಗೆ ಈಗ ಋತುರಾಜ್ ಗಾಯಕ್ವಾಡ್ ಸಿಎಸ್ಕೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತವಾಗಿ ಚೆನ್ನೈ ಪ್ರಾಂಚೈಸಿ ತಿಳಿಸಿದೆ.
ಈ ವಿಚಾರವನ್ನು ಸ್ವತಃ ಸಿಎಸ್ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದೆ. ಇಷ್ಟೇ ಅಲ್ಲ ಧೋನಿ ಆಟಗಾರನಾಗಿ ಚೆನ್ನೈ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಿಎಸ್ಕೆ ತಿಳಿಸಿದೆ.
2008ರ ಐಪಿಎಲ್ ಆರಂಭದಿಂದಲೂ ಮಹೇಂದ್ರ ಸಿಂಗ್ ಧೋನಿ ಚೆನ್ನೈ ತಂಡದ ನಾಯಕರಾಗಿದ್ದರು. ಆದರೆ ಈ ಬಾರಿ ಧೋನಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಆಟಗಾರನಾಗಿ ಇನ್ನು ಮುಂದೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
OFFICIAL STATEMENT: MS Dhoni hands over captaincy to Ruturaj Gaikwad. #WhistlePodu #Yellove
— Chennai Super Kings (@ChennaiIPL) March 21, 2024


























