ಮಂಗಳೂರು : ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬಿಜೆಪಿ ಮುಖಂಡೆ, ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತ ಯುವಕ.
ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ದುರ್ಘಟನೆ ನಡೆದಿದೆ.
ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ಬಳಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿಯಾಗಿದೆ. ತೀವ್ರ ಗಾಯಗಳಿಂದಾಗಿ ಶಮಿತ್ ಶೆಟ್ಟಿ ಮೃತಪಟ್ಟಿದ್ದಾರೆ.

























