ಕಡಬ : ಮನೆಯಲ್ಲಿ ಗೋ ಮಾಂಸ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲಾ ಕೆಮ್ಮಾರ ಆಕೀರ ಎಂಬಲ್ಲಿ ನಡೆದಿದೆ.
ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಇಲ್ಯಾಸ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಮಾ.28 ರಂದು ಬೆಳಿಗ್ಗೆ ದಾಳಿ ಮಾಡಿದ್ದು, ಕೊಯಿಲ ಗ್ರಾಮದ ಇಲ್ಯಾಸ್ ಮತ್ತು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಮಹಮ್ಮದ್ ಆಮು ಎಂಬವರುಗಳು ಅಕ್ರಮವಾಗಿ ಜಾನುವಾರುಗಳ ವಧೆ ಮಾಡುತ್ತಿರುವುದು ಕಂಡುಬಂದಿರುತ್ತದೆ.
ಸ್ಥಳದಲ್ಲಿದ್ದ ಜಾನುವಾರುಗಳ ಮಾಂಸ, ತ್ಯಾಜ್ಯ ಹಾಗೂ ಜಾನುವಾರು ವಧೆಗೆ ಬಳಸಿದ ಸೊತ್ತುಗಳು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಇಲ್ಯಾಸ್ ಹಾಗೂ ಸ್ಥಳದಿಂದ ಓಡಿಹೋಗಿರುವ ಮಹಮ್ಮದ್ ಆಮು ಎಂಬಾತನ ವಿರುದ್ದ, ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 40/2024 ಕಲಂ:4.7.12 ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



























