ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು “ಸೇವಾ ಸಂಭ್ರಮ” ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು ಅರುಣೋದಯ ಸಭಾಭವನದಲ್ಲಿ ಆಚರಣೆ ಮಾಡಲಾಯಿತು.

ಸಮಾಜದ ಜನತೆಯಿಂದ ಸಂಗ್ರಹಿಸಿ, ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂ. ಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ ಸಮಾಜ ಮತ್ತು ಅಶಕ್ತ ಸಮಾಜದ ನಡುವಿನ ಕೊಂಡಿಯೆನಿಸಿತು.
ಯುವಶಕ್ತಿ ರಕ್ತನಿಧಿಯ 10 ಸಾವಿರ ಯುನಿಟ್ ರಕ್ತದ ಪೂರೈಕೆಯ ಸಾರ್ಥಕತೆಯನ್ನು ಸಂಭ್ರಮಿಸಲಾಯಿತು.

ಹಿಂದೂ ಯುವಸೇನೆಯ ಆಂಬ್ಯುಲೆನ್ಸ್ನಲ್ಲಿ ನಿರಂತರ ಸೇವೆಗೈಯುತ್ತಿರುವ ಚಾಲಕ ರಘು ರವರನ್ನು ಮತ್ತು ನಿರಂತರ ಸಮಾಜ ಸೇವೆಗೈಯುವ ಮಂಗಳೂರು ಪರಿಸರದ ಯುವ ಕಾರ್ಪೋರೇಟರ್ ಗಣೇಶ ಕುಲಾಲ್ ರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರಾದ ವಾಸು ಪೂಜಾರಿಯವರು ವಹಿಸಿದ್ದರು.

ಅತಿಥಿಗಳಾಗಿ ತೆಂಕ ಕಜೆಕಾರ್ ಪಂಚಾಯಿತಿ ಸದಸ್ಯರಾದ ಸತೀಶ್ ಪೂಜಾರಿ ಕಜೆಕಾರ್ , ಪ್ರಗತಿಪರ ಕೃಷಿಕರಾದ ರೂಪೇಶ್ ಪೂಜಾರಿ ಬಡೆಕೊಟ್ಟು, ಅರುಣೋದಯ ಭಜನಾ ಮಂದಿರದ ಅಧ್ಯಕ್ಷರಾದ ಹೊನ್ನಪ್ಪ ಪೂಜಾರಿ ಮುದಲಾಡಿ ಮತ್ತು ಶಿವ ಛತ್ರಪತಿ ಸಂಸ್ಥೆಯ ಸುನೀಲ್ ಬಡೆಕೊಟ್ಟು ಪಾಲ್ಗೊಂಡು ಸೇವಾ ಸಂಭ್ರಮಕ್ಕೆ ಸಾಕ್ಷಿಯಾಗಿ ಶುಭ ಹಾರೈಸಿದರು.
ಹಿಂಜಾವೇ ಪ್ರಮುಖರಾದ ದಾಮೋದರ ನೆತ್ತರಕೆರೆ ಮುಖ್ಯ ಭಾಷಣಗೈದರು. ಸೇವಾಪಥ ನಡೆದು ಬಂದ ಹಾದಿಯನ್ನು ತಿಲಕ್ ಮುಂಡಾಲ ಮಂಡಿಸಿದರು.
ದಿನೇಶ್ ಬಡೆಕೊಟ್ಟು ಪ್ರಾಸ್ತವಿಕ ಮಾತಾನಾಡಿದರು. ಪ್ರಕಾಶ್ ಮುಂಡಾಲ ಸ್ವಾಗತಿಸಿದರು. ವಿಜಿತ್ ಸಂಪೋಳಿ ವಂದಿಸಿದರು.
ದೇವದಾಸ್ ಅಬುರ ಕಾರ್ಯಕ್ರಮ ನಿರೂಪಿಸಿದರು.
ಯುವಶಕ್ತಿ ಶುಭನಿಧಿಯಲ್ಲಿ 3ನೇ ಯೋಜನೆಯ ಮೂಲಕ 45,000/- ಮೌಲ್ಯದ ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಳೀಯ ಮಣಿನಾಲ್ಕೂರು ಸರ್ಕಾರಿ ಶಾಲೆಗೆ ಹಸ್ತಾಂತರಿಸಲಾಯಿತು.
ಎಲ್ಲಾ ಮಿತ್ರಸಂಸ್ಥೆಗಳನ್ನು ಅಭಿನಂದಿಸಲಾಯಿತು. ಯುವಶಕ್ತಿ ಕಡೇಶಿವಾಲಯ(ರಿ) ವತಿಯಿಂದ ಆಯೋಜಿಸಲಾಗಿದ್ದ ಜೈಶ್ರೀರಾಮ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು
ಹಲವು ಗಣ್ಯರು,ಯುವಶಕ್ತಿಯ ಸದಸ್ಯರು ದ್ವಿತೀಯ ಸೇವಾಸಂಭ್ರಮದಲ್ಲಿ ಪಾಲ್ಗೊಂಡರು.



























